ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ( bele parihara karnataka 2023-24) ಎಂದು ಬಂದಿದ್ದ 3,454 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಿತ್ತು.
Table of Contents
Bele Parihara | bele parihara karnataka 2023-24

ಬರ ಪರಿಹಾರ 3,000 ರೂ. ಹಣ ಜಮಾ ಆಗುತ್ತೆ
ಇದೀಗ ರಾಜ್ಯ ಸರ್ಕಾರ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ( Bele Parihara ) ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದು, ಕಳೆದ ತಿಂಗಳು ನೀಡಿದ್ದ ಬರ ಪರಿಹಾರ ಹಣದ ಜೊತೆಗೆ ಹೆಚ್ಚುವರಿ 3,000 ರೂಪಾಯಿ ಹಣ ಜಮಾ ಮಾಡಲು ಮುಂದಾಗಿದೆ ಎಂದು ಹೇಳಬಹುದು.
ಕಳೆದ ವರ್ಷ ಮುಂಗಾರು ವಾಡಿಕೆಗಿಂತ ಕಡಿಮೆಯಾಗಿ ಹಲವು ರೈತರಗಳ ಬೆಳೆಗಳು ಹನಿಗೊಳಗಾಗಿದ್ದವು. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಬೆಳೆ ಪರಿಹಾರಕ್ಕೆಂದು 18,000 ಕೋಟಿ ರೂಪಾಯಿಯನ್ನು ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸಿಕೊಡು ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆಯನ್ನು ಮಾಡಿತ್ತು.
ಹೀಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡ ಅನುದಾನದಲ್ಲಿ 2,451 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರವು ಕಳೆದ ತಿಂಗಳಿನಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಅಧಿಕ ರೈತರ ಖಾತೆಗೆ ನೇರವಾಗಿ ಹಣ ವನ್ನು ಜಮಾ ಮಾಡಿತ್ತು.
ಇದೀಗ ಕೇಂದ್ರ ಸರ್ಕಾರದಿಂದ ಬಂದ ಅನುದಾನದಲ್ಲಿ ಬಾಕಿ ಉಳಿದಿರುವ 1000 ಕೋಟಿ ಜೊತೆಗೆ ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ 272 ಕೋಟಿ ರೂಪಾಯಿಯನ್ನು ಸೇರಿಸಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಶ್ರೀ ಕೃಷ್ಣ ಭೈರೇಗೌಡ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.
ರಾಜ್ಯ ಸರಕಾರದ ಈ ತೀರ್ಮಾನದಿಂದ ರಾಜ್ಯದ ಸುಮಾರು 17 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮುಂದಿನ ಒಂದು ವಾರದೊಳಗೆ ಪ್ರತಿ ರೈತರ ಖಾತೆಗೆ 2,800 -3,000 ಹಣ ಜಮಾ ಮಾಡಲು ಅಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದೂ ಸಚಿವ ಶ್ರೀ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು