New ration card updates Karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನೀವು ಕೂಡ ಹೊಸ ರೇಷನ್ ಕಾರ್ಡ್ (New ration card) ಪಡೆಯುವ ನಿರೀಕ್ಷೆಯಲ್ಲಿ ಇದ್ದೀರಾ? ಹಾಗಿದ್ದರೆ ನಿಮಗೆ ಗುಡ್ ನ್ಯೂಸ್ಬಂದಿದೆ..! ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಒಂದು ಸೂಚನೆಯನ್ನು ನೀಡಿದ್ದಾರೆ.ಹಾಗಿದ್ದರೆ ಬನ್ನಿ ಆ ಸೂಚನೆ ಏನೆಂದು ಈ ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಿದ್ದೇವೆ ಕೊನೆವರೆಗೂ ಓದಿ ತಿಳಿದುಕೊಳ್ಳಿ
ಅನರ್ಹ ಬಿಪಿಎಲ್ ರೇಷನ್ ಕಾರ್ಡ್ (Ineligible BPL Ration Card)ಹೊಂದಿರುವವರನ್ನು ಗುರುತನ್ನು ಮಾಡಿ ಅವರ ಪಡಿತರ ಚೀಟಿಯನ್ನು ರದ್ದು ನ್ನು ಮಾಡಬೇಕು ಎಂದು ವಿಧಾನಸೌಧದಲ್ಲಿ ನಡೆದ ಡಿಸಿ ಮತ್ತು ಸಿಇಒ ಮತ್ತು ಎಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮಹತ್ವದ ಸೂಚನೆಯನ್ನು ನೀಡಿದ್ದಾರೆ ಅಂತ ಹೇಳಬಹುದು.
Table of Contents
New ration card updates Karnataka | ಹೊಸ ರೇಷನ್ ಕಾರ್ಡ್

ಅನರ್ಹ ಬಿಪಿಎಲ್ ರೇಷನ್ ಕಾರ್ಡುಗಳನ್ನು ರದ್ದು ಮಾಡಿ (Cancel ineligible BPL ration cards) ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ರೇಷನ್ ಕಾರ್ಡುಗಳನ್ನು ಒದಗಿಸಲು ತ್ವರಿತವಾಗಿ ಕ್ರಮವನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಶೇಕಡ 80ರಷ್ಟು ಬಿಪಿಎಲ್ ರೇಷನ್ ಕಾರ್ಡ್ ನ್ನು ಹೊಂದಿದ್ದಾರೆ. ಮತ್ತು ತಮಿಳುನಾಡು ರಾಜ್ಯದಲ್ಲಿ ಶೇಕಡ 46 ಅಷ್ಟು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ.ನೀತಿ ಆಯೋಗದ ಪ್ರಕಾರವಾಗಿ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಶೇಕಡ 5.67 ಇರಬೇಕು ಎಂದು ತಿಳಿಸಿದ್ದಾರೆ. 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ನೀಡಿದ್ದೇವೆ.
ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಿ (Cancel ineligible BPL ration cards),ಅರ್ಹರಿಗೆ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಒದಗಿಸಬೇಕು (BPL ration card should be provided to the eligible) ಎಂದು ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ ಅಂತ ಹೇಳಬಹುದು.
ಅರ್ಹ ಫಲಾನುಭವಿಗಳು ಬಹಳ ದಿನಗಳಿಂದ ಹೊಸ ರೇಷನ್ ಕಾರ್ಡ್ (New ration card) ಅನ್ನು ಪಡೆಯಲು ಕಾಯುತ್ತಾ ಕುಳಿತಿದ್ದಾರೆ. ಆದರೆ ಅನರ್ಹರು ಸರ್ಕಾರದ ಲಾಭವನ್ನು ಪಡೆಯುತ್ತಿದ್ದಾರೆ. ಅಂಥವರ ಪಡಿತರ ಚೀಟಿಯನ್ನು ರದ್ದು ಮಾಡಿಕೊಡು ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡನ್ನು ನೀಡಲು ಸರ್ಕಾರದ ಸೂಚಿಸಿದೆ.
ಸಮಗ್ರ ಪರಿಶೀಲನೆಯನ್ನು ನಡೆಸಿಕೊಂಡು ಅನರ್ಹ ಬಿಪಿಎಲ್ ರೇಷನ್ ಕಾರ್ಡುಗಳನ್ನು ಕೈ ಬಿಡಲು ಕ್ರಮವನ್ನು ಕೈಗೊಳ್ಳಬೇಕು. ಮತ್ತು ಬಿಪಿಎಲ್ ಕುಟುಂಬಗಳಲ್ಲಿನ ಮೃತ್ವಂದಿದ ಸದಸ್ಯರ ಹೆಸರನ್ನು ತೆಗೆದುಹಾಕುವ ಪ್ರಕ್ರಿಯೆಯನ್ನು ತೋರಿತವಾಗಿ ಮಾಡಬೇಕು.ಮತ್ತು ರಾಜ್ಯದ ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ ದೂರುಗಳನ್ನು ಆಲಿಸಿಕೊಂಡು ಅಗತ್ಯ ಪರಿಹಾರವನ್ನು ಒದಗಿಸಬೇಕು ಎಂದು ಕೂಡ ಸೂಚಿಸಿದ್ದಾರೆ.
ನಮ್ಮ ರಾಜ್ಯ ಸರ್ಕಾರವು ಆದಷ್ಟು ಬೇಗ ಈ ಒಂದು ಕೆಲಸವನ್ನು ಮಾಡಿದರೆ ಬಡತನ ರೇಖೆಗಿಂತ ಕೆಳಗಿರುವಂತಹ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಸಿಗುತ್ತವೆ ಅಂತ ಹೇಳಬಹುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು