bele parihara karnataka 2024:- ನಮಸ್ಕಾರ ಕರ್ನಾಟಕ (karnataka)ದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕಳೆದ ವರ್ಷ ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು ಇದರಿಂದ ರೈತರಿಗೆ ಬಹಳ ಬೆಳೆ ನಷ್ಟ ಉಂಟಾಗಿದ್ದು ಈಗಾಗಲೇ ನಮ್ಮ ಕರ್ನಾಟಕದಲ್ಲಿ ಎರಡನೇ ಹಂತದ ಬೆಳೆ ಪರಿಹಾರ ಹಣ ಬಿಡುಗಡೆಯಾಗಿದ್ದು ಇನ್ನು ಮೂರನೇ ಕಂತಿನ ಬೆಳೆ ಪರಿಹಾರ (bele parihara)ದ ಹಣವನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ 18 ಲಕ್ಷ ರೈತರಿಗೆ ಸುಮಾರು 500 ಕೋಟಿ ರೂಪಾಯಿ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವರಾದಂತ ಕೃಷ್ಣೆ ಬೈರೇಗೌಡರು ತಿಳಿಸಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.
ಇದೇ ರೀತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮಾಹಿತಿಯ ಬಗ್ಗೆ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು ನೀವು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
Table of Contents
ಬೆಳೆ ಪರಿಹಾರ ಹಣ (bele parihara karnataka 2024)…?
ಹೌದು ನಮ್ಮ ರಾಜ್ಯದಲ್ಲಿ ಕಳೆದ ವರ್ಷ ಮಳೆ ಬರದ ಕಾರಣ ತೀವ್ರ ಬರಗಾಲ ಉಂಟಾಗಿದ್ದು ರೈತರು ಬಹಳ ಬೆಳೆ ನಷ್ಟದಿಂದ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ ಅಂತವಹರ ಜೀವನಕ್ಕಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮೊದಲ ಕಂತಿನ ರೂ.2000 ಹಣವನ್ನು ಬಿಡುಗಡೆ ಮಾಡಲಾಗಿತ್ತು. ನಂತರ NDRF ನಿಗದಿಪಡಿಸಿದಂತೆ ನಮ್ಮ ಕರ್ನಾಟಕದ ರೈತರಿಗೆ ಬರಗಾಲದ ಕಾರಣದಿಂದ ಬೆಳೆ ನಷ್ಟ ಪರಿಹಾರದ ಹಣವನ್ನು ಬಿಡುಗಡೆ (bele parihara karnataka) ಮಾಡಲಾಗಿದೆ.

ಈ ನಿಟ್ಟಿನಲ್ಲಿ ನಮ್ಮ ರೈತರಿಗೆ ಸ್ವಲ್ಪ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಕಡೆಯಿಂದ ಹಣ ಎರಡು ಕಂತಿನ ರೂಪದಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಲಾಗಿದೆ.
ಮೂರನೇ ಕಂತಿನ (bele parihara karnataka 2024) ಬರ ಪರಿಹಾರದ ಹಣದ ಬಗ್ಗೆ ಕೃಷ್ಣೆ ಬೈರೇಗೌಡ ಸ್ಪಷ್ಟನೆ…?
ಹೌದು ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಾಗಲೇ ನಮ್ಮ ಕರ್ನಾಟಕದ ರೈತರು ಎರಡು ಕಂತಿನ ಬೆಳೆ ಪರಿಹಾರ (bele parihara) ಹಣವನ್ನು ಪಡೆದುಕೊಂಡಿದ್ದು ಇದಕ್ಕಾಗಿ ಕೇಂದ್ರ ಸರ್ಕಾರ ಕಡೆಯಿಂದ 3454 ಕೋಟಿ ರೂಪಾಯಿ ಹಣ ರಾಜ್ಯ ಸರ್ಕಾರಕ್ಕೆ ಬೆಳೆ ಪರಿಹಾರ ನೀಡುವ ಉದ್ದೇಶದಿಂದ ಬಿಡುಗಡೆ ಮಾಡಲಾಗಿದೆ
ಕಲಬುರ್ಗಿಯಲ್ಲಿ ನಡೆದ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಕೃಷಿ ಸಚಿವರಾದಂತ ಕೃಷ್ಣೆ ಬೈರೇಗೌಡರು ಕಳೆದ ವರ್ಷ ಬರಗಾಲದಿಂದ ಉಂಟಾದಂತ ಬೆಳೆ ನಷ್ಟದ ಪರಿಹಾರಕ್ಕಾಗಿ ರೈತರ ಜೀವನೋಪಾಯಕ್ಕಾಗಿ ಸುಮಾರು 18 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 2800 ರಿಂದ 3000 ರೂಪಾಯಿ ತನಕ ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ
3ನೇ ಕಂತಿನ ಬೆಳೆ ಪರಿಹಾರ (bele parihara karnataka 2024) ₹3000 ಹಣ ಯಾವಾಗ ಬಿಡುಗಡೆ..?
ಹೌದು , ಕೃಷ್ಣೇ ಬೈರೇಗೌಡರು ಹೇಳಿರುವ ಪ್ರಕಾರ ನಮ್ಮ ರಾಜ್ಯದಲ್ಲಿ ಸುಮಾರು 18 ಲಕ್ಷಕ್ಕಿಂತ ಹೆಚ್ಚು ರೈತರು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ ಎಂದು ಗುರುತಿಸಿ ಅವರಿಗೆ ಈ ನಿಟ್ಟಿನಲ್ಲಿ ಮೂರನೇ ಕಂತಿನ ಬೆಳೆ ಪರಿಹಾರ ಹಣವನ್ನು ಇನ್ನೂ ಒಂದು ವಾರಗಳಲ್ಲಿ ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಅಂದರೆ ಮೂರನೇ ಕಂತಿನ ಬೆಳೆ ಪರಿಹಾರ ಹಣವು ಜುಲೈ ಮೊದಲ ವಾರದ ಒಳಗಡೆ ಪ್ರತಿಯೊಬ್ಬ ಸಣ್ಣ ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತೆ ಎಂದು ಕೃಷಿ ಸಚಿವರು, ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ
ಇಷ್ಟೇ ಅಲ್ಲದೆ ರೈತರಿಗೆ ಬರಗಾಲ ಪರಿಸ್ಥಿತಿ ಎದುರಿಸಲು ಹಾಗೂ ಸಂಕಷ್ಟದ ಸಂದರ್ಭದಲ್ಲಿ ರೈತರಿಗಾಗಿ ಆರ್ಥಿಕ ನೆರವು ನೀಡಲು ನಮ್ಮ ಸರ್ಕಾರ ಯಾವಾಗಲೂ ಮುಂದಿರುತ್ತದೆ ಎಂದು ತಿಳಿಸಿದ್ದಾರೆ ಜೊತೆಗೆ ಬೆಳೆ ವಿಮೆ ಅಡಿಯಲ್ಲಿ ಸುಮಾರು 1,756 ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗೆ ಈಗಾಗಲೇ NDRF & SDRF ಸೂಚನೆಯ ಪ್ರಕಾರ ವರ್ಗಾವಣೆ ಮಾಡಲಾಗಿದ್ದು. ಒಟ್ಟಾರೆ ಹೇಳುವುದಾದರೆ ಪ್ರಕೃತಿ ವಿಕೋಪ ಮತ್ತು ಬೆಳೆ ನಷ್ಟಕ್ಕಾಗಿ ರೈತರಿಗೆ ಸುಮಾರು ಆರು ಸಾವಿರ ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು